ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕಿಟ್ ವಿತರಣೆ ಯೋಜನೆ ಸ್ವಾಗತಾರ್ಹ: ಪ್ರದೀಪ್ ಬೇಲಾಡಿ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ.

ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ತೊಗರಿ ಬೇಳೆ, ಕಾಫಿ ಪುಡಿ, ಅಡುಗೆ ಎಣ್ಣೆ, ಚಹಾ ಪುಡಿ ಮುಂತಾದ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲಗಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರತಿಯೊಂದು ಯೋಜನೆಯೂ ಅನುಕರಣೀಯವಾಗಿದೆ. ಪಡಿತರ ಜೊತೆಗೆ ನೀಡುತ್ತಿರುವ ಅಕ್ಕಿಯು ಕಾಳ ಸಂತೆಯಲ್ಲಿ ದುರುಪಯೋಗ ಆಗುತ್ತಿರುವುದನ್ನು ತಪ್ಪಿಸಲು “ಇಂದಿರಾ ಕಿಟ್” ಯೋಜನೆಯನ್ನು ಜಾರಿಗೊಳಿಸಿರುವುದು ಶ್ಲಾಘನೀಯ, ಸರ್ಕಾರದ ಯಾವುದೇ ಯೋಜನೆಗಳು ದುರುಪಯೋಗವಾಗದೇ ಅರ್ಹ ಫಲಾನುಭವಿಗಳಿಗೆ ಸಲ್ಲಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!