ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ.
ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ತೊಗರಿ ಬೇಳೆ, ಕಾಫಿ ಪುಡಿ, ಅಡುಗೆ ಎಣ್ಣೆ, ಚಹಾ ಪುಡಿ ಮುಂತಾದ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲಗಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರತಿಯೊಂದು ಯೋಜನೆಯೂ ಅನುಕರಣೀಯವಾಗಿದೆ. ಪಡಿತರ ಜೊತೆಗೆ ನೀಡುತ್ತಿರುವ ಅಕ್ಕಿಯು ಕಾಳ ಸಂತೆಯಲ್ಲಿ ದುರುಪಯೋಗ ಆಗುತ್ತಿರುವುದನ್ನು ತಪ್ಪಿಸಲು “ಇಂದಿರಾ ಕಿಟ್” ಯೋಜನೆಯನ್ನು ಜಾರಿಗೊಳಿಸಿರುವುದು ಶ್ಲಾಘನೀಯ, ಸರ್ಕಾರದ ಯಾವುದೇ ಯೋಜನೆಗಳು ದುರುಪಯೋಗವಾಗದೇ ಅರ್ಹ ಫಲಾನುಭವಿಗಳಿಗೆ ಸಲ್ಲಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…