ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಪ್ರಿಯಕರನಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗಳು!!??

ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ ಸಲುಹಿದ ತಂದೆ-ತಾಯಿಗಳ ಪ್ರೀತಿ, ಆತಂಕ, ಕಾಳಜಿಯೇ ಮಕ್ಕಳಿಗೆ ಅರ್ಥವಾಗುತ್ತಿಲ್ಲ. ಹೈದರಾಬಾದ್ ನಲ್ಲಿ 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಭೀಕರ ಘಟನೆ ನಡೆದಿದೆ.

ತನ್ನ 19 ವರ್ಷದ ಬಾಯ್ ಫ್ರೆಂಡ್ ಹಾಗೂ ಆತನ ಕಿರಿಯ ಸೋದರನ ಜೊತೆ ಸೇರಿಕೊಂಡು ತಾಯಿಯನ್ನು ಮಗಳು ಮುಗಿಸಿದ್ದಾಳೆ. ಹೈದರಾಬಾದ್‌ನ ಜೆಡಿಮೆಟ್ಲಾ ಪ್ರದೇಶದ ಎನ್‌ಎಲ್‌ಬಿ ನಗರದಲ್ಲಿ ಈ ಅಘಾತಕಾರಿ ಘಟನೆ ನಡೆದಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 8 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 19 ವರ್ಷದ ಯುವಕನ ಪರಿಚಯವಾಗಿದೆ. ಬಳಿಕ ಆತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಈ ವಿಷಯ ಯುವತಿಯ ತಾಯಿಗೆ ಗೊತ್ತಾಗಿದೆ. ತಾಯಿ, ಅಪ್ರಾಪ್ತ ಮಗಳು ಯುವಕನ ಜೊತೆ ಸಂಬಂಧ ಬೆಳೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮನೆಯಲ್ಲಿ ತಾಯಿ- ಮಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇನ್ನು ಇದೇ ವಿಷಯಕ್ಕೆ ಜೂನ್ 23 ರಂದು ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿ ಅಂಜಲಿಯನ್ನು ಮುಗಿಸಿದ್ದಾಳೆ. ಈ ವೇಳೆ ಬಾಯ್ ಫ್ರೆಂಡ್ ಹಾಗೂ ಆತನ ಸೋದರ ಕೂಡ ಮನೆಯಲ್ಲಿದ್ದು ಮಹಿಳೆಯ ಕುತ್ತಿಗೆ ಹಿಸುಕಿದ್ದಾರೆ. ಬಳಿಕ ಐರನ್ ರಾಡ್ ನಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಅಂಜಲಿಗೆ ಇರಿದಿದ್ದಾರೆ. ಹೈದರಾಬಾದ್‌ನ ಜೆಡಿಮೆಟ್ಲಾ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ತಾಯಿಯೇ ತನ್ನ ಜೀವ ಕಳೆದುಕೊಂಡಿದ್ದಾಳೆ. ಇದಕ್ಕಿಂತ ದಾರುಣ ಕೃತ್ಯ ಮತ್ತೊಂದಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!