ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ ಸಲುಹಿದ ತಂದೆ-ತಾಯಿಗಳ ಪ್ರೀತಿ, ಆತಂಕ, ಕಾಳಜಿಯೇ ಮಕ್ಕಳಿಗೆ ಅರ್ಥವಾಗುತ್ತಿಲ್ಲ. ಹೈದರಾಬಾದ್ ನಲ್ಲಿ 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಭೀಕರ ಘಟನೆ ನಡೆದಿದೆ.
ತನ್ನ 19 ವರ್ಷದ ಬಾಯ್ ಫ್ರೆಂಡ್ ಹಾಗೂ ಆತನ ಕಿರಿಯ ಸೋದರನ ಜೊತೆ ಸೇರಿಕೊಂಡು ತಾಯಿಯನ್ನು ಮಗಳು ಮುಗಿಸಿದ್ದಾಳೆ. ಹೈದರಾಬಾದ್ನ ಜೆಡಿಮೆಟ್ಲಾ ಪ್ರದೇಶದ ಎನ್ಎಲ್ಬಿ ನಗರದಲ್ಲಿ ಈ ಅಘಾತಕಾರಿ ಘಟನೆ ನಡೆದಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 8 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 19 ವರ್ಷದ ಯುವಕನ ಪರಿಚಯವಾಗಿದೆ. ಬಳಿಕ ಆತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಈ ವಿಷಯ ಯುವತಿಯ ತಾಯಿಗೆ ಗೊತ್ತಾಗಿದೆ. ತಾಯಿ, ಅಪ್ರಾಪ್ತ ಮಗಳು ಯುವಕನ ಜೊತೆ ಸಂಬಂಧ ಬೆಳೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮನೆಯಲ್ಲಿ ತಾಯಿ- ಮಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇನ್ನು ಇದೇ ವಿಷಯಕ್ಕೆ ಜೂನ್ 23 ರಂದು ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿ ಅಂಜಲಿಯನ್ನು ಮುಗಿಸಿದ್ದಾಳೆ. ಈ ವೇಳೆ ಬಾಯ್ ಫ್ರೆಂಡ್ ಹಾಗೂ ಆತನ ಸೋದರ ಕೂಡ ಮನೆಯಲ್ಲಿದ್ದು ಮಹಿಳೆಯ ಕುತ್ತಿಗೆ ಹಿಸುಕಿದ್ದಾರೆ. ಬಳಿಕ ಐರನ್ ರಾಡ್ ನಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಅಂಜಲಿಗೆ ಇರಿದಿದ್ದಾರೆ. ಹೈದರಾಬಾದ್ನ ಜೆಡಿಮೆಟ್ಲಾ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ತಾಯಿಯೇ ತನ್ನ ಜೀವ ಕಳೆದುಕೊಂಡಿದ್ದಾಳೆ. ಇದಕ್ಕಿಂತ ದಾರುಣ ಕೃತ್ಯ ಮತ್ತೊಂದಿಲ್ಲ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…