ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ ಸಲುಹಿದ ತಂದೆ-ತಾಯಿಗಳ ಪ್ರೀತಿ, ಆತಂಕ, ಕಾಳಜಿಯೇ ಮಕ್ಕಳಿಗೆ ಅರ್ಥವಾಗುತ್ತಿಲ್ಲ. ಹೈದರಾಬಾದ್ ನಲ್ಲಿ 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಭೀಕರ ಘಟನೆ ನಡೆದಿದೆ.
ತನ್ನ 19 ವರ್ಷದ ಬಾಯ್ ಫ್ರೆಂಡ್ ಹಾಗೂ ಆತನ ಕಿರಿಯ ಸೋದರನ ಜೊತೆ ಸೇರಿಕೊಂಡು ತಾಯಿಯನ್ನು ಮಗಳು ಮುಗಿಸಿದ್ದಾಳೆ. ಹೈದರಾಬಾದ್ನ ಜೆಡಿಮೆಟ್ಲಾ ಪ್ರದೇಶದ ಎನ್ಎಲ್ಬಿ ನಗರದಲ್ಲಿ ಈ ಅಘಾತಕಾರಿ ಘಟನೆ ನಡೆದಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 8 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 19 ವರ್ಷದ ಯುವಕನ ಪರಿಚಯವಾಗಿದೆ. ಬಳಿಕ ಆತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಈ ವಿಷಯ ಯುವತಿಯ ತಾಯಿಗೆ ಗೊತ್ತಾಗಿದೆ. ತಾಯಿ, ಅಪ್ರಾಪ್ತ ಮಗಳು ಯುವಕನ ಜೊತೆ ಸಂಬಂಧ ಬೆಳೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮನೆಯಲ್ಲಿ ತಾಯಿ- ಮಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇನ್ನು ಇದೇ ವಿಷಯಕ್ಕೆ ಜೂನ್ 23 ರಂದು ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿ ಅಂಜಲಿಯನ್ನು ಮುಗಿಸಿದ್ದಾಳೆ. ಈ ವೇಳೆ ಬಾಯ್ ಫ್ರೆಂಡ್ ಹಾಗೂ ಆತನ ಸೋದರ ಕೂಡ ಮನೆಯಲ್ಲಿದ್ದು ಮಹಿಳೆಯ ಕುತ್ತಿಗೆ ಹಿಸುಕಿದ್ದಾರೆ. ಬಳಿಕ ಐರನ್ ರಾಡ್ ನಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಅಂಜಲಿಗೆ ಇರಿದಿದ್ದಾರೆ. ಹೈದರಾಬಾದ್ನ ಜೆಡಿಮೆಟ್ಲಾ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ತಾಯಿಯೇ ತನ್ನ ಜೀವ ಕಳೆದುಕೊಂಡಿದ್ದಾಳೆ. ಇದಕ್ಕಿಂತ ದಾರುಣ ಕೃತ್ಯ ಮತ್ತೊಂದಿಲ್ಲ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…