ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧವನ್ನು ಹಾಕಲಾಗಿದೆ. ಕೆಆರ್ಎಸ್ ಡ್ಯಾಂ ಈಗಾಗಲೇ ಭರ್ತಿಯಂಚಿಗೆ ತಲುಪಿದ್ದು 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕಾವೇರಿ ನದಿಯಿಂದ 29 ಸಾವಿರ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿ ಬರುತ್ತಿದ್ದು ಇದರಿಂದ ಜಲಾಶಯವು 121 ಅಡಿ ಭರ್ತಿಯಾಗಿದೆ.
ಇನ್ನು ಗಂಟೆ ಗಂಟೆಗೂ ಒಳ ಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್ಎಸ್ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇನ್ನು ದಿನದಿಂದ ದಿನಕ್ಕೆ ನೀರಿನ ಮಟ್ಟ 50 ಕ್ಯೂಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಇರುವುದರಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ನದಿ ಪಾತ್ರದಲ್ಲಿ ಬರುವ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿಯವರು ಆದೇಶ ಹೊರಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…