ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧವನ್ನು ಹಾಕಲಾಗಿದೆ. ಕೆಆರ್ಎಸ್ ಡ್ಯಾಂ ಈಗಾಗಲೇ ಭರ್ತಿಯಂಚಿಗೆ ತಲುಪಿದ್ದು 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕಾವೇರಿ ನದಿಯಿಂದ 29 ಸಾವಿರ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿ ಬರುತ್ತಿದ್ದು ಇದರಿಂದ ಜಲಾಶಯವು 121 ಅಡಿ ಭರ್ತಿಯಾಗಿದೆ.
ಇನ್ನು ಗಂಟೆ ಗಂಟೆಗೂ ಒಳ ಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್ಎಸ್ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇನ್ನು ದಿನದಿಂದ ದಿನಕ್ಕೆ ನೀರಿನ ಮಟ್ಟ 50 ಕ್ಯೂಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಇರುವುದರಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ನದಿ ಪಾತ್ರದಲ್ಲಿ ಬರುವ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿಯವರು ಆದೇಶ ಹೊರಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…