ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿ0ದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಆರಂಭದಲ್ಲಿ 6 ಬಸ್ಗಳು ಸಂಚಾರ ನಡೆಸಲಿವೆ. ನಾನ್ಸ್ಟಾಪ್ ಬಸ್ ಸೇವೆಯಿಂದ ಪುತ್ತೂರಿನಿಂದ ಒಂದು ಗಂಟೆಯಲ್ಲಿ ಮಂಗಳೂರು ತಲುಪಲು ಸಾಧ್ಯ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್ಆರ್ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇನ್ನು ಸಭೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಹೊಸ ಪೂಜಾರಿ, ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಾಂತ್, ಡಿಪೋ ಮ್ಯಾನೆಜರ್ ಸುಬ್ರಹ್ಮಣ್ಯ ಪ್ರಸಾದ ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…