ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿ0ದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಆರಂಭದಲ್ಲಿ 6 ಬಸ್ಗಳು ಸಂಚಾರ ನಡೆಸಲಿವೆ. ನಾನ್ಸ್ಟಾಪ್ ಬಸ್ ಸೇವೆಯಿಂದ ಪುತ್ತೂರಿನಿಂದ ಒಂದು ಗಂಟೆಯಲ್ಲಿ ಮಂಗಳೂರು ತಲುಪಲು ಸಾಧ್ಯ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್ಆರ್ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇನ್ನು ಸಭೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಹೊಸ ಪೂಜಾರಿ, ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಾಂತ್, ಡಿಪೋ ಮ್ಯಾನೆಜರ್ ಸುಬ್ರಹ್ಮಣ್ಯ ಪ್ರಸಾದ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…