ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಬಳಿ ಕೆಎಸ್ಆರ್ಟಿಸಿ ಬಸ್ಗಳ ನಡುವಿನ ಅಪಘಾತದಲ್ಲಿ ಒರ್ವ ಮಹಿಳೆ ಮೃತಪಟ್ಟು, ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಜೂನ್ 25ರಂದು ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮಡಿಕೇರಿಯಿಂದ ಮಡಿಕೇರಿ ಆಸುಪಾಸಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಸುಳ್ಯ ತಾಲೂಕಿನ ಅರಂತೋಡು ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮಂಗಳೂರಿಗೆ ಚಿಕಿತ್ಸೆಗೆ ತೆರಳಿ ಮಡಿಕೇರಿಗೆ ಹಿಂತಿರುಗುತ್ತಿದ್ದ ಕುಶಾಲನಗರದ ಗುಡ್ಡೆ ಹೊಸೂರು ಭಾರತಿ (50) ಎಂಬವರು ತೀವ್ರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತರಾಗಿದ್ದಾರೆ. ಚೈತ್ರ (22), ಮಾಯಿಲ್ಪ (43), ಶ್ರಾವ್ಯಶ್ರೀ (24), ಕುಮುದಿನಿ (24), ಯಮುನಾ (55), ವೇದಿಕಾ (10), ಯಕ್ಷಿತಾ (22), ಸಮದ್ (38), ಮುತ್ತಮ್ಮ (37), ಚಂದ್ರಾವತಿ (43), ತಿರುಮಲೇಶ್ವರ (49), ಸೋನಿ ಹೆಚ್.ಪಿ. (21), ಚಿದಾನಂದ (42), ನಯನ ವಿತೋಬಾರಾವ್ (25), ಸುಬ್ರಮಣಿ (51), ಕಾವೇರಮ್ಮ (35), ಅಭಿಲಾಷ್ (21), ಜಯಂತ್ (17), ಕರಣ್ (37) ಮೊದಲಾದವರು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೆಲವರು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಇದರಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…