ಮಕ್ಕಳು ಎಂದರೆ ತಾಯಿಯಂದರಿಗೆ ಎಲ್ಲಿಲ್ಲದ ಪ್ರೀತಿ ಆದರೆ ಇಲ್ಲೊಬ್ಬ ಪಾಪಿ ತನ್ನ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಜೂನ್ 26 ರ ಮುಂಜಾನೆ ನಡೆದಿದೆ.
ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ನೆರೆಮನೆಯ ಲೋಲಿಟಾ ಈ ಕೃತ್ಯದಿಂದ (30) ಗಂಭೀರ ಗಾಯಗೊಂಡಿದ್ದಾರೆ. ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾರವರನ್ನು ಮನೆಗೆ ಕರೆಸಿದ್ದಾನೆ ಎನ್ನಲಾಗಿದೆ. ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತಕ್ಕೆ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಮೃತದೇಹ ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…