ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹುಣಸೂರು: ನಿಲುವಾಗಿಲು ಗ್ರಾಮದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತ!!???

ನಿಲುವಾಗಿಲು ಗ್ರಾಮದಲ್ಲಿ ಡಿಪ್ಲೊಮಾ, ಪಿ.ಯು ಕಾಲೇಜು ಸ್ಥಾಪಿಸುವ ಪ್ರದೇಶ ಹಾಗೂ ದೇವಸ್ಥಾನ ಇರುವ ಪ್ರದೇಶದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸತ್ಯ ಎಂ.ಎ ಎಸ್ ಫೌಂಡೇಶನ್ ಹಾಗೂ ನಿಲುವಾಗಿಲು ಗ್ರಾಮಸ್ಥರೊಂದಿಗೆ ಹುಣಸೂರು ಉಪವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸತ್ಯ ಎಂ.ಎ.ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ರವರು ಮಾತನಾಡಿ ನಿಲುವಾಗಿಲು ಗ್ರಾಮದಲ್ಲಿ ಈಗಾಗಲೇ ಡಿಪ್ಲೋಮಾ ಕಾಲೇಜು ಹಾಗೂ ಪಿ.ಯು. ಕಾಲೇಜಿನ ಸ್ಥಾಪನೆಗೆ ಸರ್ಕಾರದಿಂದ ಅನುಮೋದನೆಯಾಗಿ ಸ್ಥಾಪನೆಯಾಗಲಿದ್ದು, ಹಾಗೂ ದೇವಸ್ಥಾನದ ಪಕ್ಕದಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಾಪನೆಗೆ ತಟ್ಟೆಕೆರೆ ಗ್ರಾಮ ಪಂಚಾಯಿತಿಯಿ0ದ ಅನುಮತಿ ಕೋರಲಾಗಿದ್ದು, ಈ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಾಪನೆಯಿಂದ ಗ್ರಾಮದಲ್ಲಿ ನೆಲೆಸಿರುವ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಈ ಬಾರ್ ಅಂಡ್ ರೆಸ್ಟೋರೆಂಟ್‌ನ್ನು ಹೆಚ್.ಎ. ಆದಿನಾರಾಯಣಶೆಟ್ಟಿ ಸಾಯಿ ಬ್ರಹ್ಮಗುರು ಕನ್ವೆನ್ಷನ್ ಹಾಲ್ ಪಕ್ಕದಲ್ಲೇ ನಿರ್ಮಿಸಲಾಗುತ್ತಿದೆ. ಈ ಛತ್ರದಲ್ಲಿ ಮದುವೆ, ಧಾರ್ಮಿಕ ಕಾರ್ಯಕ್ರಮಗಳು, ಮಕ್ಕಳ ಉಪನಯನ ಇತ್ಯಾದಿ ಶುಭ ಸಮಾರಂಭಗಳು ನಿಯಮಿತವಾಗಿ ನಡೆಯುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಸ್ಥಳೀಕರಲ್ಲದೇ ನೆರೆಹೊರೆಯ ಗ್ರಾಮಗಳಿಂದ ಜಿಲ್ಲೆಗಳಿಂದ ಜನರು ಆಗಮಿಸಲಿದ್ದು, ಈ ಪ್ರದೇಶದಲ್ಲಿ ಬಾರ್ ನಿರ್ಮಾಣವಾದರೆ ಮದ್ಯಪಾನ ಮಾಡಿದ ವ್ಯಕ್ತಿಗಳಿಂದ ಇಲ್ಲಿ ಗಲಾಟೆ, ಅಸಭ್ಯವರ್ತನೆ, ಸಾರ್ವಜನಿಕ ಅಶಾಂತಿ ಹಾಗೂ ಭದ್ರತೆಗೆ ತೀವ್ರ ಧಕ್ಕೆಯಾಗುವ ಸಂಭವವಿರುತ್ತದೆ. ನಿಲುವಾಗಿಲು ಗ್ರಾಮದಲ್ಲಿ ಈ ಬಾರ್ ನಿರ್ಮಾಣ ಮಾಡಲು ಅನುಮತಿ ನೀಡಿರುವ ಕೇವಲ 100 ಮೀ. ಅಂತರದಲ್ಲಿ ಡಿಪ್ಲೋಮಾ ಕಾಲೇಜು, ಪಿ.ಯು ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುಮೋದನೆಯಾಗಿ ಕಾಲೇಜು ನಿರ್ಮಾಣಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ. ಈ ಬಾರ್ ಅಂಡ್ ರೆಸ್ಟೋರೆಂಟ್ ನಿರ್ಮಾಣದಿಂದ ನಿಲುವಾಗಿಲು ಗ್ರಾಮದಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಒಂಟಿಯಾಗಿ ತಿರುಗಾಡಲು ಭಯದ ವಾತಾವರಣ ನಿರ್ಮಾಣವಾಗುತ್ತದೆ. ಉದ್ದೇಶಿತ ಬಾರ್ ಪಕ್ಕದಲ್ಲೇ ಶನಿವಾರಸ್ವಾಮಿ ದೇವಾಲಯವು ಇದ್ದು, ಪವಿತ್ರ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯುವ ಸ್ಥಳವಾಗಿದ್ದು, ಬಾರ್ ನಿರ್ಮಾಣವಾದರೆ ದೇವಾಲಯಕ್ಕೆ ಬರುವ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲಿದೆ. ಬಾರ್ ಅಂಡ್ ರೆಸ್ಟೋರೆಂಟ್ ನಿರ್ಮಾಣವಾಗಲಿರುವ ಪ್ರದೇಶವು ಮುಖ್ಯರಸ್ತೆಯ ಪಕ್ಕದಲ್ಲಿದ್ದು, ಹೆಚ್ಚಿನ ವಾಹನ ಸಂಚಾರ ದಟ್ಟಣೆ, ಟ್ರಾಫಿಕ್ ಜಾಮ್ ನಡೆದು ಅನುಚಿತ ವರ್ತನೆ ಹಾಗೂ ಅಪರಾಧ ಚಟುವಟಿಕೆಗಳ ತಾಣವಾಗಲಿದೆ. ತಟ್ಟೆಕೆರೆ ಗ್ರಾಮ ಪಂಚಾಯ್ತಿಯಿ0ದ ಅನುಮತಿ ಪಡೆಯಲು ಉದ್ದೇಶಿಸಿರುವ ಬಾರ್ ಅಂಡ್ ರೆಸ್ಟೋರೆಂಟ್ ನಿರ್ಮಾಣವಾದರೆ ನಿಲುವಾಗಿಲು ಗ್ರಾಮವಲ್ಲದೆ ಸುತ್ತಮುತ್ತಲಿನ ಗ್ರಾಮಗಳಿಗೂ ಮಧ್ಯಪಾನ ಸಂಸ್ಕೃತಿ ಆವರಿಸಿ ಗ್ರಾಮದ ಶಾಂತಿ ನೆಮ್ಮದಿಗೆ ಭಂಗವಾಗಲಿದೆ. ನಿಲುವಾಗಿಲು ಗ್ರಾಮವು ಸುಂದರ ಪ್ರಕೃತಿಯಿಂದ ಕೂಡಿದ್ದು, ಇಲ್ಲಿನ ಗ್ರಾಮಸ್ಥರು ನಿಸರ್ಗಪ್ರಿಯರಾಗಿದ್ದು, ಈ ಬಾರ್ ಸ್ಥಾಪನೆಯಿಂದ ನಿಲುವಾಗಿಲು ಗ್ರಾಮದಲ್ಲಿ ಅಶಾಂತಿ ನೆಲೆಸುವ ವಾತಾವರಣ ನಿರ್ಮಾಣವಾಗಲಿದೆ. ಆದ್ದರಿಂದ ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಪರಿಗಣಿಸಿ ಉದ್ದೇಶಿತ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಾಪನೆಗೆ ಗ್ರಾಮಸ್ಥರಗಳ ತೀವ್ರ ವಿರೋಧವಿದ್ದು, ಇದಕ್ಕೆ ಅನುಮತಿ ನೀಡಬಾರದೆಂದು ಇಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜೆ.ಸಿ.ಬಿ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀನಿವಾಸ, ರೈತ ಸಂಘದ ಎಂ. ಕೃಷ್ಣೇಗೌಡ, ನಾಗೇಂದ್ರ ನಿವೃತ್ತ ಪೊಲೀಸ್ ಅಧಿಕಾರಿ, ಸಮಾಜ ಸೇವಕರಾದ ರಾಕೇಶ್ ರಾವ್, ನಿಲುವಾಗಿಲು ಗ್ರಾಮಸ್ಥರುಗಳಾದ ನಾಗಮ್ಮ, ಶೃತಿ, ವಿಜಯಲಕ್ಷ್ಮಿ, ರೇಣುಕಾ, ಪಾರ್ವತಿ, ಚಂದ್ರಕಲಾ, ಸುಲೋಚನ ಅಡಿಗ, ನಾಗೇಂದ್ರ, ಶೇಖರ, ಹರೀಶ, ನಾಗೇಶ್, ಚೇತನ್, ಅಭಿ, ಶಶಿಧರ್ ಇನ್ನು ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!