ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ಜೀವ ಕಳೆದುಕೊಂಡ ವೃದ್ಧ ದಂಪತಿ

ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ.

ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು. ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!