ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ.
ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು. ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…