ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ.
ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು. ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…