ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ.
ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು. ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…