ಹೆಂಡತಿ ಹಾಗೂ ಆಕೆಯ ಪ್ರಿಯಕರ ಕಾನ್ಸ್ಟೆಬಲ್ನ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಜೀವ ಬಿಟ್ಟಿರುವ ಘಟನೆ ಹರಿಯಾಣದ ರೋಹ್ಟಕ್ನ ದೊಭಾ ಗ್ರಾಮದಲ್ಲಿ ನಡೆದಿದೆ.
ಜೀವ ಕಳೆದುಕೊಳ್ಳುವ ಮೊದಲು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಮಗನ್ ಎಂಬಾತ ಪ್ರಾಣ ಕಳೆದುಕೊಂಡಿರುವ ವ್ಯಕ್ತಿ. ಮಗನ್ ಮತ್ತು ದಿವ್ಯಾ ದಂಪತಿಗೆ ಒಂದು ಗಂಡು ಮಗುವಿದೆ. ಹೆಂಡತಿ ದಿವ್ಯಾ ಹಾಗೂ ಈಕೆಯ ಪ್ರಿಯಕರ ಮಹಾರಾಷ್ಟ್ರ ಮೂಲದ ಕಾನ್ಸ್ಟೆಬಲ್ ದೀಪಕ್ ಆರೋಪಿಗಳು ಆಗಿದ್ದಾರೆ. ಮಗನ್ ಪ್ರಾಣ ಕಳೆದುಕೊಳ್ಳುವಾಗ ಮಾಡಿದ್ದ ವಿಡಿಯೋ ವೈರಲ್ ಆದ್ಮೇಲೆ ಅವರ ಕುಟುಂಬಸ್ಥರು ಹುಡುಕಲು ಹೋದಾಗ ಅದಗಾಲೇ ಅವನ ಉಸಿರು ನಿಂತು ಹೋಗಿತ್ತು.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಂದೆಯ ಜೀವ ತಗೆದು ಅವರ ಆಸ್ತಿಗಳನ್ನು ಮಾರಾಟ ಮಾಡಿ, 5 ಲಕ್ಷ ರೂಪಾಯಿ ಕೊಡು ಎಂದು ಹೆಂಡತಿ ದಿವ್ಯಾ ಕಿರುಕುಳ ನೀಡಿದ್ದಳು. ಈ ದುಡ್ಡನ್ನು ತನ್ನ ಪ್ರಿಯಕರ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದರಿಂದ ಲಂಚ ಕೊಟ್ಟು ಹುದ್ದೆಯಲ್ಲಿ ಬಡ್ತಿ ಪಡೆಯಲು ಯೋಜನೆ ರೂಪಿಸಿದ್ದರು. ಇಷ್ಟೇ ಅಲ್ಲದೇ, ಇಬ್ಬರು ಮುಂಬೈನಲ್ಲಿ ನೆಲೆಸಲು ಈಗಾಗಲೇ ಯೋಜನೆ ರೂಪಿಸಿದ್ದರು ಎಂದು ವಿಡಿಯೋದಲ್ಲಿ ಮಗನ್ ಆರೋಪಿಸಿದ್ದಾನೆ. ಗೋದಿ ಮಾರಾಟ ಮಾಡಿದರಿಂದ ಬಂದ ಹಣದಲ್ಲಿ ಹೆಂಡತಿಗೆ 5 ಲಕ್ಷ ರೂಪಾಯಿಗಳನ್ನು ಕೊಟ್ಟಿದ್ದೇನೆ. ಜೊತೆಗೆ ನನ್ನ ಬ್ರೇಸ್ಲೇಟ್ ಮಾರಾಟ ಮಾಡಿ 2 ಲಕ್ಷ ರೂಪಾಯಿ ನೀಡಿದ್ದೇನೆ. ಇಷ್ಟೇಲ್ಲಾ ಕೊಟ್ಟರೂ ಇನ್ನು ಒಂದೂವರೆ ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದರು. ನಾನು ಹಣ ಕೊಟ್ಟಿರುವ ಬಗ್ಗೆ ಮನೆಯಲ್ಲಿ ದಾಖಲೆಗಳು ಇವೆ. ಯಾವುದೇ ಕಾರಣಕ್ಕೂ ನಾನು ನನ್ನ ತಂದೆಯ ಜೀವ ತೆಗೆಯಲು ಸಾಧ್ಯವಿಲ್ಲ. ಅದಕ್ಕಾಗಿ ನನ್ನ ಪ್ರಾಣವನ್ನೇ ತೆಗೆದುಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…