ಹೆಂಡತಿ ಹಾಗೂ ಆಕೆಯ ಪ್ರಿಯಕರ ಕಾನ್ಸ್ಟೆಬಲ್ನ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಜೀವ ಬಿಟ್ಟಿರುವ ಘಟನೆ ಹರಿಯಾಣದ ರೋಹ್ಟಕ್ನ ದೊಭಾ ಗ್ರಾಮದಲ್ಲಿ ನಡೆದಿದೆ.
ಜೀವ ಕಳೆದುಕೊಳ್ಳುವ ಮೊದಲು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಮಗನ್ ಎಂಬಾತ ಪ್ರಾಣ ಕಳೆದುಕೊಂಡಿರುವ ವ್ಯಕ್ತಿ. ಮಗನ್ ಮತ್ತು ದಿವ್ಯಾ ದಂಪತಿಗೆ ಒಂದು ಗಂಡು ಮಗುವಿದೆ. ಹೆಂಡತಿ ದಿವ್ಯಾ ಹಾಗೂ ಈಕೆಯ ಪ್ರಿಯಕರ ಮಹಾರಾಷ್ಟ್ರ ಮೂಲದ ಕಾನ್ಸ್ಟೆಬಲ್ ದೀಪಕ್ ಆರೋಪಿಗಳು ಆಗಿದ್ದಾರೆ. ಮಗನ್ ಪ್ರಾಣ ಕಳೆದುಕೊಳ್ಳುವಾಗ ಮಾಡಿದ್ದ ವಿಡಿಯೋ ವೈರಲ್ ಆದ್ಮೇಲೆ ಅವರ ಕುಟುಂಬಸ್ಥರು ಹುಡುಕಲು ಹೋದಾಗ ಅದಗಾಲೇ ಅವನ ಉಸಿರು ನಿಂತು ಹೋಗಿತ್ತು.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಂದೆಯ ಜೀವ ತಗೆದು ಅವರ ಆಸ್ತಿಗಳನ್ನು ಮಾರಾಟ ಮಾಡಿ, 5 ಲಕ್ಷ ರೂಪಾಯಿ ಕೊಡು ಎಂದು ಹೆಂಡತಿ ದಿವ್ಯಾ ಕಿರುಕುಳ ನೀಡಿದ್ದಳು. ಈ ದುಡ್ಡನ್ನು ತನ್ನ ಪ್ರಿಯಕರ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದರಿಂದ ಲಂಚ ಕೊಟ್ಟು ಹುದ್ದೆಯಲ್ಲಿ ಬಡ್ತಿ ಪಡೆಯಲು ಯೋಜನೆ ರೂಪಿಸಿದ್ದರು. ಇಷ್ಟೇ ಅಲ್ಲದೇ, ಇಬ್ಬರು ಮುಂಬೈನಲ್ಲಿ ನೆಲೆಸಲು ಈಗಾಗಲೇ ಯೋಜನೆ ರೂಪಿಸಿದ್ದರು ಎಂದು ವಿಡಿಯೋದಲ್ಲಿ ಮಗನ್ ಆರೋಪಿಸಿದ್ದಾನೆ. ಗೋದಿ ಮಾರಾಟ ಮಾಡಿದರಿಂದ ಬಂದ ಹಣದಲ್ಲಿ ಹೆಂಡತಿಗೆ 5 ಲಕ್ಷ ರೂಪಾಯಿಗಳನ್ನು ಕೊಟ್ಟಿದ್ದೇನೆ. ಜೊತೆಗೆ ನನ್ನ ಬ್ರೇಸ್ಲೇಟ್ ಮಾರಾಟ ಮಾಡಿ 2 ಲಕ್ಷ ರೂಪಾಯಿ ನೀಡಿದ್ದೇನೆ. ಇಷ್ಟೇಲ್ಲಾ ಕೊಟ್ಟರೂ ಇನ್ನು ಒಂದೂವರೆ ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದರು. ನಾನು ಹಣ ಕೊಟ್ಟಿರುವ ಬಗ್ಗೆ ಮನೆಯಲ್ಲಿ ದಾಖಲೆಗಳು ಇವೆ. ಯಾವುದೇ ಕಾರಣಕ್ಕೂ ನಾನು ನನ್ನ ತಂದೆಯ ಜೀವ ತೆಗೆಯಲು ಸಾಧ್ಯವಿಲ್ಲ. ಅದಕ್ಕಾಗಿ ನನ್ನ ಪ್ರಾಣವನ್ನೇ ತೆಗೆದುಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…