ಭಾರೀ ಮಳೆಯಿಂದ ಹರಿಯುವ ನದಿಯಲ್ಲಿ ಸಿಲುಕಿಕೊಂಡಿದ್ದ 9 ಜನರನ್ನು ಪೊಲೀಸರು ಹಾಗೂ ಎಸ್ಡಿಆರ್ಎಫ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ಭಾರೀ ಮಳೆಯಿಂದ ತವಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ ಆಗಿದೆ. ಈ ವೇಳೆ ನದಿಗೆ ಇಳಿದಿದ್ದ 9 ಜನರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದರಿಂದ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಎಸ್ಡಿಆರ್ಎಫ್ ತಂಡ ಸೇತುವೆ ಮೇಲಿನಿಂದ ಹಗ್ಗ ಬಿಟ್ಟಿದ್ದಾರೆ. ಈ ಹಗ್ಗಗಳನ್ನು ಹಿಡಿದುಕೊಂಡು ಒಬ್ಬೊಬ್ಬರೇ ಮೇಲಕ್ಕೆ ಬಂದಿದ್ದಾರೆ.
ಮದನ್ ಲಾಲ್ ಎನ್ನುವವರು ತವಿ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದರು. ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಬಳಿಕ ಮದನ್ ಲಾಲ್ ಅವರನ್ನು ಎಸ್ಡಿಆರ್ಎಫ್ ಟೀಮ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ಪಿಂಡದಾನಕ್ಕೆ0ದು ನದಿಗೆ ಹೋಗಿದ್ದ ವ್ಯಕ್ತಿ ಒಬ್ಬರನ್ನು ಸೇರಿದಂತೆ ಇನ್ನು 7 ಜನರನ್ನು ರಕ್ಷಣೆ ಮಾಡಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಕುದುರೆಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…