ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಾಡಿಗೆ ವಿಚಾರದಲ್ಲಿ ಆಟೊ ಚಾಲಕನಿಗೆ ಗಂಭೀರ ಹಲ್ಲೆ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರದಲ್ಲಿ ಹಲವು ಸಮಯಗಳಿಂದ ಆಟೋ ಯೂನಿಯನ್ ಗಳ ಮಧ್ಯೆಯೇ ಗಲಾಟೆಗಳು ನಡೆಯುತ್ತಿರುತ್ತವೆ.

ಅದರ ಮುಂದುವರೆದ ಭಾಗವಾಗಿ ಕೆಲವು ಚಾಲಕರು ಸೇರಿ ಓರ್ವ ಚಾಲಕನಿಗೆ ಗಂಭೀರ ಹಲ್ಲೆ ನಡೆಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಬಿಗ್ ಬಝಾರ್ ಸಮೀಪದ ಪಾರ್ಕಿಂಗ್ ನಲ್ಲಿ ಹಲ್ಲೆ ನಡೆದಿದ್ದು, ಪ್ರಸಾದ್ ಎಂಬ ಆಟೋ ಚಾಲಕ ಗಾಯಗೊಂಡಿದ್ದರೆ. ರಾಘು ಮತ್ತು ಸಹಚರರು ಹಲ್ಲೆ ನಡೆಸಿದ್ದಾಗಿ ಸಹೋದ್ಯೋಗಿಗಳು ಆರೋಪಿಸಿದ್ದಾರೆ. ಇದೀಗ ಗಾಯಗೊಂಡ ಆಟೋ ಚಾಲಕ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಹತ್ತಾರು ಚಾಲಕರು ಆಸ್ಪತ್ರೆ ಬಳಿ ನೆರೆದು ನ್ಯಾಯಕ್ಕಾಗಿ ಆಗ್ರಹ ಮಾಡಿದ್ದಾರೆ.

ಘಟನೆ ಸಂಬ0ಧ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ನಗರದೊಳಗೇ ನಮಗೆ ಬಾಡಿಗೆ ಮಾಡಲು ಬಿಡುತ್ತಿಲ್ಲ. ನಗರದೊಳಗೆ ಐದು ಯೂನಿಯನ್ ಗಳಿವೆ. ಅವರವರ ಸಂಘ ಅವರವರಿಗೆ. ಈ ಹಿಂದೆ ಕೂಡ ಹಲ್ಲೆ ನಡೆದಿದೆ. ನಾವೆಲ್ಲಿಗೆ ಹೋಗಬೇಕು? ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಿ ಬೇಕಿದ್ದರೂ ಬಾಡಿಗೆ ಮಾಡಬಹುದು ಎಂದು ಪೊಲೀಸ್ ಇಲಾಖೆ ,ನಗರಸಭೆ ಈಗಾಗಲೇ ಅನುಮತಿ ಕೊಟ್ಟಿದೆ. ಆದರೂ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಈ ವಿಷಯವನ್ನು ಶಾಸಕರು ಮತ್ತಿತರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಆಟೋ ಚಾಲಕರು ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!