ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ.
ಇಂದು ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ, ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…