ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ, ಸಾಮಾಜಿಕ ಧಾರ್ಮಿಕ ಮುಂದಾಳು ರಾಜೇಶ್ ಕುಲಾಲ್ ಕುಕ್ಕಾಜೆ ಅವರು ಜ್ವರದಿಂದ ನಿಧನರಾಗಿದ್ದಾರೆ. ಅವರು ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 25 ರಂದು ಬುಧವಾರ ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಐಸಿಯು ಘಟಕದಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜೇಶ್ ಕುಲಾಲ್ ಅವರು ಕುಕ್ಕಾಜೆ ಯುವಕ ಮಂಡಲದ ,ಸಿದ್ದಿವಿನಾಯಕ ಮಂದಿರ ಕುಕ್ಕಾಜೆ ಇಲ್ಲಿ ಸಕ್ರೀಯಾಗಿದ್ರು. ಇದರ ಕುಕ್ಕಾಜೆ ಬಿಜೆಪಿ ಬೂತ್ ಸಮಿತಿ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕವಾಗಿ ಸಕ್ರಿಯರಾಗಿದ್ದ ಇವರು ಬಿಸ್ಕೆಟ್ ಕಂಪೆನಿಯೊ0ದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ರು. ಇವರಿಗೆ ಇಬ್ಬರು ಸಣ್ಣ ಪ್ರಾಯದ ಹೆಣ್ಣು ಮಕ್ಕಳಿದ್ದಾರೆ. ತಾಯಿ, ಪತ್ನಿ, ತಂಗಿ ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…