ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಹುಡುಗರು ಸಿನಿಮಾದ ಪಂಕಜಾ ಹಾಡಿನ ನಟಿ ನಿಧನ

ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ ದಿಂದ ನಿಧನ ಹೊಂದಿದ್ದಾರೆ.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‌ನ ನಟ, ನಟಿಯರು ಬಿಗ್ ಶಾಕ್‌ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು. ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆದಾಗಲೇ ನಟಿಯು ಕೊನೆಯುಸಿರೆಳೆದಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಕೂಡ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ. 2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್‌ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು. ಶೆಫಾಲಿ ಜರಿವಾಲಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!