ಜನ ಮನದ ನಾಡಿ ಮಿಡಿತ

Advertisement

ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಹುಡುಗರು ಸಿನಿಮಾದ ಪಂಕಜಾ ಹಾಡಿನ ನಟಿ ನಿಧನ

ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ ದಿಂದ ನಿಧನ ಹೊಂದಿದ್ದಾರೆ.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‌ನ ನಟ, ನಟಿಯರು ಬಿಗ್ ಶಾಕ್‌ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು. ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆದಾಗಲೇ ನಟಿಯು ಕೊನೆಯುಸಿರೆಳೆದಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಕೂಡ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ. 2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್‌ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು. ಶೆಫಾಲಿ ಜರಿವಾಲಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!