ಬಾಲಿವುಡ್ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ ದಿಂದ ನಿಧನ ಹೊಂದಿದ್ದಾರೆ.
ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್ನ ನಟ, ನಟಿಯರು ಬಿಗ್ ಶಾಕ್ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು. ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆದಾಗಲೇ ನಟಿಯು ಕೊನೆಯುಸಿರೆಳೆದಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.
ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಕೂಡ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ. 2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು. ಶೆಫಾಲಿ ಜರಿವಾಲಾ ಅವರು ಗುಜರಾತ್ನ ಅಹಮದಾಬಾದ್ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು ಎನ್ನಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…