ಮೂರನೇ ಹೆಂಡತಿಯ ಜೀವ ತೆಗೆದು ನಾಪತ್ತೆ ಆಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ 23 ವರ್ಷಗಳ ಬಳಿಕ ಅರೆಸ್ಟ್ ಮಾಡಿದ್ದಾರೆ.
ಹಾಲದಾಳ ಗ್ರಾಮದ ಆರೋಪಿ ಹನುಮಂತಪ್ಪ ನನ್ನ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯು ತನ್ನ 3ನೇ ಹೆಂಡತಿ ರೇಣುಕಮ್ಮಳನ್ನ ಸುಳ್ಳು ಹೇಳಿ ಮದುವೆ ಆಗಿದ್ದನು. ನನಗೆ ಸರ್ಕಾರಿ ಕೆಲಸ ಇದೆ ಎಂದು ಹೆಂಡತಿಯ ಮನೆಯವರನ್ನು ನಂಬಿಸಿ ಮದುವೆಯಾಗಿದ್ದನು.
ಮದುವೆಯಾದ ಮೇಲೆ 2002ರಲ್ಲಿ ಹೆಂಡತಿಯನ್ನ ಯಾರಿಗೂ ಗೊತ್ತಾಗದ ಹಾಗೇ ಕೊಲೆ ಮಾಡಿ ಬಳಿಕ ಗೋಣಿಚೀಲದಲ್ಲಿ ಮೃತದೇಹ ಹಾಕಿ ಕಂಪ್ಲಿಗೆ ಹೋಗುತ್ತಿದ್ದ ಬಸ್ವೊಂದಕ್ಕೆ ಹಾಕಿದ್ದನು. ಇದಾದ ಮೇಲೆ ಆರೋಪಿಯು ಕೂಡ ನಾಪತ್ತೆ ಆಗಿದ್ದನು. ಇತ್ತೀಚೆಗೆ ಸ್ವಗ್ರಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮಕ್ಕೆ ಹನುಮಂತಪ್ಪ ಬಂದಿದ್ದನು. ಕೊಪ್ಪಳದ ಗಂಗಾವತಿ ಠಾಣೆಯ ಪೊಲೀಸರು 23 ವರ್ಷದ ಬಳಿಕ ಹನುಮಂತಪ್ಪನನ್ನ ಅರೆಸ್ಟ್ ಮಾಡಿದ್ದಾರೆ. ಅತ್ತ ಮಗಳನ್ನು ಕಳೆದುಕೊಂಡ ಪೋಷಕರು ಈಗಲೂ ಕಣ್ಣೀರು ಹಾಕುತ್ತಿದ್ದಾರೆ. ಈ ಹಿಂದೆ ಗಂಗಾವತಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…