ಮೂರನೇ ಹೆಂಡತಿಯ ಜೀವ ತೆಗೆದು ನಾಪತ್ತೆ ಆಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ 23 ವರ್ಷಗಳ ಬಳಿಕ ಅರೆಸ್ಟ್ ಮಾಡಿದ್ದಾರೆ.
ಹಾಲದಾಳ ಗ್ರಾಮದ ಆರೋಪಿ ಹನುಮಂತಪ್ಪ ನನ್ನ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯು ತನ್ನ 3ನೇ ಹೆಂಡತಿ ರೇಣುಕಮ್ಮಳನ್ನ ಸುಳ್ಳು ಹೇಳಿ ಮದುವೆ ಆಗಿದ್ದನು. ನನಗೆ ಸರ್ಕಾರಿ ಕೆಲಸ ಇದೆ ಎಂದು ಹೆಂಡತಿಯ ಮನೆಯವರನ್ನು ನಂಬಿಸಿ ಮದುವೆಯಾಗಿದ್ದನು.
ಮದುವೆಯಾದ ಮೇಲೆ 2002ರಲ್ಲಿ ಹೆಂಡತಿಯನ್ನ ಯಾರಿಗೂ ಗೊತ್ತಾಗದ ಹಾಗೇ ಕೊಲೆ ಮಾಡಿ ಬಳಿಕ ಗೋಣಿಚೀಲದಲ್ಲಿ ಮೃತದೇಹ ಹಾಕಿ ಕಂಪ್ಲಿಗೆ ಹೋಗುತ್ತಿದ್ದ ಬಸ್ವೊಂದಕ್ಕೆ ಹಾಕಿದ್ದನು. ಇದಾದ ಮೇಲೆ ಆರೋಪಿಯು ಕೂಡ ನಾಪತ್ತೆ ಆಗಿದ್ದನು. ಇತ್ತೀಚೆಗೆ ಸ್ವಗ್ರಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮಕ್ಕೆ ಹನುಮಂತಪ್ಪ ಬಂದಿದ್ದನು. ಕೊಪ್ಪಳದ ಗಂಗಾವತಿ ಠಾಣೆಯ ಪೊಲೀಸರು 23 ವರ್ಷದ ಬಳಿಕ ಹನುಮಂತಪ್ಪನನ್ನ ಅರೆಸ್ಟ್ ಮಾಡಿದ್ದಾರೆ. ಅತ್ತ ಮಗಳನ್ನು ಕಳೆದುಕೊಂಡ ಪೋಷಕರು ಈಗಲೂ ಕಣ್ಣೀರು ಹಾಕುತ್ತಿದ್ದಾರೆ. ಈ ಹಿಂದೆ ಗಂಗಾವತಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…