ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ದ.ಕ.ಜಿಲ್ಲಾಡಳಿತ, ದ.ಕ.ಜಿ.ಪಂ.ಸ್ವಚ್ಛ ಭಾರತ್ ಮಿಷನ್,ಪುದು ಗ್ರಾ.ಪಂ., ಅಡ್ಯಾರ್ ಗ್ರಾ.ಪಂ. ಹಾಗೂ ಹಸಿರು ದಳ ಮಂಗಳೂರು ಆಶ್ರಯದಲ್ಲಿ ದ.ಕ.ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಮಾರ್ಗದರ್ಶನದಲ್ಲಿ ಹೆದ್ದಾರಿ ಬದಿಯ ತ್ಯಾಜ್ಯಗಳನ್ನು ತೆರವು ಮಾಡಲಾಯಿತು. ಎರಡು ಗ್ರಾ.ಪಂ.ತ0ಡದ ಜತೆಗೆ ಸ್ವಚ್ಛ ಭಾರತ್ ಮಿಷನ್ ತಂಡ, ಹಸಿರು ದಳದ ಕಾರ್ಯಕರ್ತರು, ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಅಭಿಯಾನದ ಭಾಗವಾಗಿ ಈಗಾಗಲೇ ಹಸಿರು ದಳದ ನೇತೃತ್ವದಲ್ಲಿ ವೇಸ್ಟ್ ಡಪ್ಪಿಂಗ್ ಸ್ಕ್ವಾಡ್ ರಚನೆಗೊಂಡು ಅದರ ತಂಡದ ಸದಸ್ಯರು ಹೆದ್ದಾರಿ ಬದಿ ಬೆಳಗ್ಗೆ ಹಾಗೂ ಸಂಜೆಯ ಹೊತ್ತು ನಿಂತು ತ್ಯಾಜ್ಯ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ತಂಡಗಳು, ಸ್ವಸಹಾಯ ಗುಂಪುಗಳ ಸದಸ್ಯರು, ಕಾಲೇಜುಗಳ ತಂಡಗಳು ಕೂಡ ಜಾಗೃತಿ ಕಾರ್ಯದಲ್ಲಿ ಭಾಗಿಯಾಗಿದೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…