ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.

ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.



