ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ-ಬೆಂಗಳೂರು ರಸ್ತೆಯ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.
ಚಾಲಕ ಕಡೇಶಿವಾಲಯ ನಿವಾಸಿ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪು ಕಲ್ಲಿನ ಕೆತ್ತನೆಯ ಕೆಲಸ ಮಾಡುತ್ತಿರುವ ರಂಜಿತ್ ಅವರು ಕಡೇಶಿವಾಲಯ ಮನೆಯಿಂದ ಶಂಭೂರು ಕಡೆಗೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಕಾರು ಹೆದ್ದಾರಿಯಲ್ಲಿ ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಜಖಂಗೊ0ಡಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ರಂಜಿತ್ ನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡುಹೋಗಲಾಗಿದೆ.
ಈ ವೇಳೆ ಅತ ಮಾತನಾಡಿದ್ದು, ಬೆಳಿಗ್ಗೆ ಲಾರಿ ಅಪಘಾತದಲ್ಲಿ ಮೃತರಾದ ಚಿದಾನಂದ ಅವರ ಮನೆಗೆ ತೆರಳುವುದಾಗಿ ತಿಳಿಸಿದ್ದು, ಕಾರಿನ ಗ್ಲಾಸ್ ಮೇಲೆ ವಿರುದ್ದ ದಿಕ್ಕಿನಲ್ಲಿ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ಚೆಲ್ಲಿದ್ದು ನಿಯಂತ್ರಣ ಕಳೆದುಕೊಂಡಿತು ಎಂದು ಹೇಳಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಸತ್ಯಸಂಗತಿ ಪೋಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…