ಬಂಟ್ವಾಳದಲ್ಲಿನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿಯಾಗಿದ್ದಾನೆ. ಈತ 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ಅಕ್ಬರ್ ಸಿದ್ದಿಕ್ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂನ್ 30ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಲಾಯಿತು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



