ತೀರಾ ಸಾಧು ಸ್ವಭಾವದ ಎಲ್ಲರ ಅಚ್ಚುಮೆಚ್ಚಿನ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದ ಬಸವ ಕೃಷ್ಣ(18) ತೀವ್ರ ಅಸ್ವಸ್ಥಗೊಂಡು ಪಶು ಅಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದೆ.
ಶ್ರೀ ದೇವಳದ ಜಾತ್ರಾ ಮಹೋತ್ಸವ ಸಹಿತ ಬಲಿ ಉತ್ಸವಗಳಲ್ಲಿ ಭಾಗಿಯಾಗುತ್ತಾ ಸುದೃಢ ಶರೀರದ ಕೃಷ್ಣ ಕಳೆದ 8 ದಿನಗಳಿಂದ ಆಹಾರ ಸೇವಿಸದೆ, ಮಲಮೂತ್ರ ವಿಸರ್ಜಿಸದೆ ಇದ್ದ ಕಾರಣ ಸ್ಥಳೀಯ ಪಶು ವೈದ್ಯರಾದ ಡಾ.ಪ್ರಸನ್ನರವರಿಂದ ಚಿಕಿತ್ಸೆ ಪಡೆದಿದ್ದ. ವಾರ ಕಳೆದರೂ ಸಮಸ್ಯೆ ಪರಿಹಾರವಾಗದ ಕಾರಣ ವೈದ್ಯರ ಸಲಹೆಯಂತೆ ಕೃಷ್ಣನನ್ನು ಮಂಗಳೂರು ಪಶು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರಾದ ಡಾ.ಜಿ.ಕೆ.ಭಟ್ ಮತ್ತು ಡಾ.ಮೃದುಳಾ ಪರಿಶೀಲಿಸಿದ ಬಳಿ ಕೃತಕ ಪೈಪ್ ಅಳವಡಿಸಿ ಮಲಮೂತ್ರವನ್ನು ಹೊರತೆಗೆಯಲಾಗಿದ್ದು ಕನಿಷ್ಟ 8 ಬಕೆಟ್ನಷ್ಟು ಮೂತ್ರವನ್ನು ಹಾಗೂ ಶಸ್ತ್ರಚಿಕಿತ್ಸೆ ನಡೆಸಿ ಪ್ಲಾಸ್ಟಿಕ್ ತ್ಯಾಜ್ಯ ತೆಗೆದ ಬಳಿಕ ಕೃಷ್ಣ ಆಹಾರ ಸೇವಿಸಲು ಆರಂಭಿಸಿದ್ದು, ಶೀಘ್ರ ಸಮಸ್ಯೆ ಪರಿಹಾರವಾಗುವ ಭರವಸೆ ವ್ಯಕ್ತವಾಗಿತ್ತು. ಅದರಂತೆ ಸೋಮವಾರ ರಾತ್ರಿ ಬಸವ ಕೃಷ್ಣ ನನ್ನು ಬಪ್ಪನಾಡಿಗೆ ವಾಪಸ್ ತರಲಾಗಿ ಚಿಕಿತ್ಸೆ ಹಾಗೂ ಆಹಾರ ನೀಡಲಾಗುತ್ತಿತ್ತು
ಆದರೆ ಮಂಗಳವಾರ ಬೆಳಿಗ್ಗೆ 5 ಗಂಟೆಗೆ ಪಶುಪಾಲಕ ತಾರಾನಾಥ ಹೋಗಿ ನೋಡುವಾಗ ಬಸವ ಕೃಷ್ಣ ಉಸಿರು ನಿಲ್ಲಿಸಿದ್ದಾನೆ. ಬಳಿಕ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಹಣಾಧಿಕಾರಿ ಶ್ವೇತಾಪಳ್ಳಿ, ಮುಲ್ಕಿ ನ.ಪಂ ಅಧ್ಯಕ್ಷ ಸತೀಶ ಅಂಚನ್, ಸದಸ್ಯ ದಯಾವತಿ ಅಂಚನ್ ಬಾಲಚಂದ್ರ ಕಾಮತ್, ಮಾಜೀ ಸದಸ್ಯ ಪುರುಷೋತ್ತಮ್, ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ, ವಿಶ್ವನಾಥ ಬಪ್ಪನಾಡು, ಸಂಜೀವ ದೇವಾಡಿಗ, ದಯಾನಂದ ಮಟ್ಟು, ಸೇರಿ ಸಾವಿರಾರು ಜನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ದೇವಸ್ಥಾನದ ಎದುರು ಭಾಗದಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿ ಬಸವ ಕೃಷ್ಣನನ್ನು ದಫನ ಮಾಡಲಾಯಿತು. 18 ವರ್ಷ ಪ್ರಾಯದ ಕೃಷ್ಣನನ್ನು 12ವರ್ಷಗಳ ಹಿಂದೆ ಶ್ರೀ ದೇವಳಕ್ಕೆ ಭಕ್ತರೊಬ್ಬರು ದಾನವಾಗಿ ನೀಡಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…