ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ವತಿಯಿಂದ ಡಾ. ಬಿ.ಸಿ.ರಾಯ್ ಜನ್ಮದಿನ ಪ್ರಯುಕ್ತ ನಡೆದ ವೈದ್ಯರ ದಿನ ಕಾರ್ಯಕ್ರಮ ಆವಿಷ್ಕಾರ್ ಸಭಾಂಗಣದಲ್ಲಿ ನಡೆಯಿತು.
ಹಿರಿಯ ಕುಟುಂಬ ವೈದ್ಯರುಗಳಾದ ಡಾ. ಎಂ. ನೀಲಯ್ಯ ಗಂಜೀಮಠ, ಡಾ. ರಾಮಚಂದ್ರ ಐತಾಳ್ ಹೆಬ್ರಿ, ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಬಳಿಕ ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸನ್ಮಾನ ಸ್ವೀಕರಿಸಿ ಮಾತನಾಡಿ, ವೈದ್ಯಕೀಯ ವೃತ್ತಿಗೆ ಕಾಲಿಟ್ಟ ಬಳಿಕ ನಾವು ಎಷ್ಟು ಜ್ಞಾನವಂತರಾಗುತ್ತೇವೆ, ಕೌಶಲ್ಯ ವೃದ್ಧಿಸಿಕೊಂಡಿದ್ದೇವೆ ಎಂಬುದು ಎಷ್ಟು ಮುಖ್ಯವಾಗುತ್ತದೆಯೋ ಹಾಗೆಯೇ ನಮ್ಮನ್ನು ಸಾಕಿ ಬೆಳೆಸಿದ ಪೋಷಕರನ್ನು ಹಾಗೂ ಶಿಕ್ಷಣ ನೀಡಿದ ಸಂಸ್ಥೆಯ ಕೊಡುಗೆ ಯಾವುದೇ ಕಾಲಕ್ಕೂ ಮರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ. ಎಂ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…