ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಕೃಷ್ಣ ರಾವ್ ಸಂತ್ರಸ್ತೆಯ ಬೇಡಿಕೆಯಂತೆ ಮದುವೆಯಾಗಬೇಕು”; ಜಿಲ್ಲಾಧ್ಯಕ್ಷ ದಿವಾಕರ್ ಆಗ್ರಹ

ಪುತ್ತೂರಿನ ಬಿಜೆಪಿ ಪಕ್ಷದ ನಗರಸಭಾ ಸದಸ್ಯರಾದ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ ಗರ್ಭವತಿಯನ್ನಾಗಿಸಿ ಎಸ್ಕೇಪ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದೆ.

ಈ ವೇಳೆ ಜಿಲ್ಲಾಧ್ಯಕ್ಷರಾದ ಎಂ ದಿವಾಕರ್ ರಾವ್ ಮಾತನಾಡಿ, ಹಿಂದೂ ಪರ ಸಂಘಟನೆಗಳು ಆ ಹೆಣ್ಣು ಮಗುವಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು. ಸರಕಾರ ಕೂಡ ಆ ಸಂತ್ರಸ್ತೆಗೆ ನ್ಯಾಯವನ್ನು ಕೊಡಿಸುವ ಪ್ರಯತ್ನ ಮಾಡಬೇಕು. ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿದ ಕೃಷ್ಣ ರಾವ್ ಸಂತ್ರಸ್ತ ಯುವತಿಯ ಬೇಡಿಕೆಯಂತೆ ಆಕೆಯನ್ನು ಮದುವೆಯಾಗಿ ಪತ್ನಿಯಾಗಿ ಒಪ್ಪಿಕೊಳ್ಳಬೇಕು. ಪುತ್ತೂರಿನ ಶಾಸಕರು ಈ ಮದುವೆಯ ಜವಾಬ್ದಾರಿಯನ್ನು ವಹಿಸಬೇಕು. ಇದು ಈಡೇರದಿದ್ದರೆ ಜಗನ್ನಿವಾಸ್ ರಾವ್ ಮನೆಯ ಮುಂದೆ ಅನಿರ್ದಿಷ್ಟಾವಧಿ ಧರಣಿಯನ್ನು ವೆಲ್ಫೇರ್ ಪಾರ್ಟಿ ಆಯೋಜಿಸಲಿದೆ ಎಂದು ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಇದರ ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲ್ಯಾನ್, ಸಾಮಾಜಿಕ ಹೋರಾಟಗಾರರಾದ ಪ್ರೇಮ, ನಿರ್ಮಲಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!