ವಂಚನೆಗೊಳಪಟ್ಟ ಸಂತ್ರಸ್ತೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.
ಬಳಿಕ ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬಾಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ, ಇರುತ್ತೇವೆ ಎಂದು ಹೇಳಿದ್ದೇವೆ. ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದಿದ್ದಾರೆ. ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಅವರು ಮಾತನಾಡಿ, ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಮನವಿಕೊಂಡಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…