ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಕುಡಿತದ ನಶೆಯಲ್ಲಿ ಗಾಜು ಒಡೆದ ವಿವಾಹಿತ ದಾರುಣ ಸಾವು

ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್‌ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ 38 ವರ್ಷದ ನಿತೇಶ್ ನಾಯಕ್ ಸಾವನ್ನಪ್ಪಿದ್ದಾನೆ.

ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ ಹಾಗೂ ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈಯಲ್ಲಿರುವ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.

ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಪಡೆದಿದ್ರು. ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!