ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ 38 ವರ್ಷದ ನಿತೇಶ್ ನಾಯಕ್ ಸಾವನ್ನಪ್ಪಿದ್ದಾನೆ.
ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ ಹಾಗೂ ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈಯಲ್ಲಿರುವ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.
ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಪಡೆದಿದ್ರು. ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…