ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ 38 ವರ್ಷದ ನಿತೇಶ್ ನಾಯಕ್ ಸಾವನ್ನಪ್ಪಿದ್ದಾನೆ.
ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ ಹಾಗೂ ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈಯಲ್ಲಿರುವ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.
ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಪಡೆದಿದ್ರು. ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…