ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: “ರಥಬೀದಿ ಜವನೆರ್”ಎಂಬ ಹೆಸರಿನ ತಂಡದವರಿಂದ ಭತ್ತದ ನಾಟಿ..!

ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.

“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.

ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!