ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: “ರಥಬೀದಿ ಜವನೆರ್”ಎಂಬ ಹೆಸರಿನ ತಂಡದವರಿಂದ ಭತ್ತದ ನಾಟಿ..!

ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.

“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.

ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!