ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: “ರಥಬೀದಿ ಜವನೆರ್”ಎಂಬ ಹೆಸರಿನ ತಂಡದವರಿಂದ ಭತ್ತದ ನಾಟಿ..!

ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.

“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.

ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!