ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.
“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.
ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…