ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.
“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.
ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…