ಆತ ಮಾಡೆಲ್ ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ.
ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ರು. ಹೀಗೆ ಬಂದವರು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿ0ದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ. ಹೌದು,ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರಂತೆ ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…