ಆತ ಮಾಡೆಲ್ ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ.
ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ರು. ಹೀಗೆ ಬಂದವರು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿ0ದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ. ಹೌದು,ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರಂತೆ ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…