ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ.
ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯುಂಟಾಗಿ ಕೆಲಸವೇ ಇಲ್ಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ, ಅಭಿವೃದ್ಧಿ ಕಾರ್ಯಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ಮರಳು ನೀತಿ ಮಾಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಾ ಬಂದರೂ ಈ ಬಗ್ಗೆ ಸ್ಪಷ್ಟ ಕಾನೂನು ರೂಪಿಸಿಲ್ಲವಾದ್ದರಿಂದ ಈಗಲೂ ಸಹ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳು ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಒಂದಾದರೂ ಸಭೆ ನಡೆಸಿದೆಯಾ? ಕ್ಷೇತ್ರದ ಶಾಸಕನಾಗಿರುವ ನನಗಂತೂ ಈ ಬಗ್ಗೆ ಯಾವ ಮಾಹಿತಿಯೂ ಬಂದಿಲ್ಲ. ಕೇರಳದಲ್ಲಿ ಒಂದು ಟನ್ ಕೆಂಪು ಕಲ್ಲಿಗೆ 32 ರೂ. ರಾಯಲ್ಟಿ ಇದ್ದರೆ, ಕರ್ನಾಟಕದಲ್ಲಿ 282 ರೂ. ಇದೆ. ಹಾಗಾಗಿ ಕೇರಳದಿಂದ ಉಳ್ಳಾಲ ಕಡೆಗೆ ಅಕ್ರಮ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿಯೂ ಇದೆ. ಹೀಗೆ ನಮ್ಮ ಜಿಲ್ಲೆಯಲ್ಲಿ ಸಮಸ್ಯೆಗಳ ಸರಮಾಲೆ ಮೂಲಕ ತೀವ್ರ ಆರ್ಥಿಕ ಸಂಕಷ್ಟ ತಂದಿರುವುದು ಕಾಂಗ್ರೆಸ್ಸಿನ ಮತ್ತೊಂದು ಗ್ಯಾರಂಟಿ ಎಂದಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…