ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.

2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌ0ಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ. ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.



