ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌ0ಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ. ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…