ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ.
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…