ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ನಾಡದೋಣಿ ಮೀನುಗಾರರಿಂದ ಮೀನು ಬೇಟೆ ಶುರು..!

ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.

ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.

ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!